Headlines

Independence Day 2026: ಸಿಗಂದೂರು ಸೇತುವೆ ಮೇಲೆ ನಡುರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ! – Kannada News | 80th Independence Day: Midnight Flag Hoisting on Sigandur Bridge in Shivamogga

ಶಿವಮೊಗ್ಗ, ಆಗಸ್ಟ್ 15: ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಐತಿಹಾಸಿಕ ಸಿಗಂದೂರು ಸೇತುವೆಯ ಮೇಲೆ ಕರೂರು ಹೋಬಳಿಯ ಸ್ಥಳೀಯ ಜನರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ದೇಶಪ್ರೇಮ ಮೆರೆದಿದ್ದಾರೆ. ಕರೂರಿನ ಕಳಸವಳ್ಳಿ-ಅಂಬಾರಗೋಡ್ಲು ಸಂಪರ್ಕಿಸುವ ಶರಾವತಿ ಹಿನ್ನೀರಿನ ಬೃಹತ್ ಸೇತುವೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ, ‘ವಂದೇ ಮಾತರಂ’ ಹಾಗೂ ‘ಭಾರತ್ ಮಾತಾ ಕೀ ಜೈ’ ಎಂಬ ದೇಶಭಕ್ತಿಯ ಘೋಷಣೆಗಳನ್ನು ಕೂಗಿ ಸಂಭ್ರಮಿಸಲಾಯಿತು. ಈ ಅಪರೂಪದ ಕ್ಷಣದಲ್ಲಿ…

Read More

IND vs SL: 600ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ – Kannada News | IND vs SL 1st Test: India’s 600th Test Begins in Galle, Gill Wins Toss and Playing XI

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಆಗಸ್ಟ್ 15 ರಂದು ಈ ಟೆಸ್ಟ್ ಪಂದ್ಯ ಶುರುವಾಗಿರುವುದು ಭಾರತೀಯರಿಗೆ ವಿಶೇಷವಾಗಿರುವುದರ ಜೊತೆಗೆ ಇದು ಟೀಂ ಇಂಡಿಯಾಕ್ಕೆ 600ನೇ ಟೆಸ್ಟ್ ( 600th Test) ಪಂದ್ಯವಾಗಿದೆ. ಈ ಮೂಲಕ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಟೀಂ ಇಂಡಿಯಾ ಈ ಐತಿಹಾಸಿಕ ಟೆಸ್ಟ್ ಪಂದ್ಯವನ್ನು ಗೆಲ್ಲುವ…

Read More

ಬೆಂಗಳೂರಿನ ವಿದ್ಯಾರ್ಥಿನಿಯಿಂದ ‘ಡೆಕ್ ಆಫ್ ಕಿಂಗ್ಸ್’ ಕಾರ್ಡ್ ಗೇಮ್: ಇತಿಹಾಸ ಕಲಿಕೆಗೆ ಹೊಸ ಸ್ಪರ್ಶ – Kannada News | Bengaluru Teen Creates ‘Deck of Kings’ History Card Game

ಬೆಂಗಳೂರಿನ ವಿದ್ಯಾರ್ಥಿನಿಯಿಂದ ‘ಡೆಕ್ ಆಫ್ ಕಿಂಗ್ಸ್’ ಕಾರ್ಡ್ ಗೇಮ್ ಬೆಂಗಳೂರು, ಆಗಸ್ಟ್ 15: ನಗರದ (Bengaluru) 10ನೇ ತರಗತಿಯ 15 ವರ್ಷದ ವಿದ್ಯಾರ್ಥಿನಿ ಸಿಂಚನಾ ಎಸ್. ಇತಿಹಾಸದ ಪಾಠಗಳನ್ನು ಸುಲಭವಾಗಿ ಮತ್ತು ಆಸಕ್ತಿದಾಯಕವಾಗಿ ಕಲಿಯಲು ‘ಡೆಕ್ ಆಫ್ ಕಿಂಗ್ಸ್’ (Deck of Kings) ಎಂಬ ವಿಶೇಷ ಕಾರ್ಡ್ ಗೇಮ್ ಅನ್ನು ವಿನ್ಯಾಸಗೊಳಿಸಿದ್ದಾಳೆ. ಇತಿಹಾಸದ ಪಠ್ಯಪುಸ್ತಕಗಳಲ್ಲಿನ ಹೆಸರು ಮತ್ತು ದಿನಾಂಕಗಳನ್ನು ನೆನಪಿಟ್ಟುಕೊಳ್ಳಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಆಟವನ್ನು ರೂಪಿಸಲಾಗಿದೆ. ಪೋಕೆಮೋನ್ ಪ್ರೇರಣೆ ‘ಪೋಕೆಮೋನ್’ (Pokemon)…

Read More

ಸಪ್ತಧಾರಾ; ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಘೋಷಿಸಿದ ‘ವಿಕಸಿತ ಭಾರತ’ದ 7 ಸುಧಾರಣೆಗಳಿವು – Kannada News | PM Independence Day Speech What is Narendra Modis Saptadhara plan 7 Viksit reforms

ನವದೆಹಲಿ, ಆಗಸ್ಟ್ 15: ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ (Independence Day 2026) ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಗಾಗಿ ‘ಸಪ್ತಧಾರಾ’ ಸುಧಾರಣೆಗಳನ್ನು ಘೋಷಿಸಿದ್ದಾರೆ. ಉತ್ಪಾದನೆ, ಕೃಷಿ, ತಂತ್ರಜ್ಞಾನ, ಗತಿ ಶಕ್ತಿ, ರಕ್ಷಣೆ, ಹಸಿರು ಇಂಧನ ಮತ್ತು ಸಾಫ್ಟ್ ಪವರ್‌ಗಳನ್ನು ಭಾರತದ ಭವಿಷ್ಯವನ್ನು ರೂಪಿಸುವ 7 ಶಕ್ತಿಯ ಧಾರೆಗಳೆಂದು ಪ್ರಧಾನಿ ಗುರುತಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಾಚೀನ ಕಾಲದ ‘ಸಪ್ತ ಸಿಂಧು’ (7 ನದಿಗಳು)…

Read More

ಯುವಜನತೆಗೆ ಎಐ ಶಿಕ್ಷಣದ ಕೊಡುಗೆ: 80ನೇ ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆ – Kannada News | CM DKS Bengaluru Independence Day Address: Progress, Drought, Youth and AI Initiatives

ಬೆಂಗಳೂರು, ಆ.15: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಮಸ್ತ ರಾಜ್ಯದ ಜನತೆಯನ್ನು ಉದ್ದೇಶಿಸಿ ಸುದೀರ್ಘ ಭಾಷಣ ಮಾಡಿದರು. ತಮ್ಮ ಭಾಷಣದಲ್ಲಿ ರಾಜ್ಯದ ಅಭಿವೃದ್ಧಿಯ ದೂರದೃಷ್ಟಿ, ಆರ್ಥಿಕ ಪ್ರಗತಿ, ಬರ ನಿರ್ವಹಣೆ ಹಾಗೂ ಗ್ಯಾರಂಟಿ ಯೋಜನೆಗಳ ಸಾಧನೆಗಳನ್ನು ದೇಶದ ಮುಂದೆ ತೆರೆದಿಟ್ಟರು. “ಕಳೆದ 2 ತಿಂಗಳಲ್ಲಿ ಜನಸ್ನೇಹಿತ ಆಡಳಿತ ನೀಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪಂಚಾಯಿತಿ ಹಾಗೂ ಹೋಬಳಿ ಮಟ್ಟದಲ್ಲಿ ಶಾಸಕರು…

Read More

Happy Independence Day 2026: ನಿಮ್ಮ ಪ್ರೀತಿಪಾತ್ರರೊಂದಿಗೆ ಹಂಚಿಕೊಳ್ಳಲು ಇಲ್ಲಿವೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದೇಶಗಳು – Kannada News | Happy Independence Day 2026: Here are the best Independence Day messages, Quotes

ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳುImage Credit source: magnific ಆಗಸ್ಟ್ 15 ಭಾರತೀಯರ ಪಾಲಿಗೆ ವಿಶೇಷ ದಿನವಾಗಿದೆ.  1947 ರ ಈ ದಿನದಂದು, ಭಾರತವು ದೀರ್ಘ ಹೋರಾಟದ ನಂತರ ಬ್ರಿಟೀಷರನ್ನು ದೇಶ ಬಿಟ್ಟು ತೊಳಗಿಸಿ ಸಂಪೂರ್ಣ ಸ್ವಾತಂತ್ರ್ಯವನ್ನು ಪಡೆಯಿತು. ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ವೀರರನ್ನು ನಮಿಸಲು ಪ್ರತಿವರ್ಷ ದೇಶಾದ್ಯಂತ ಬಹಳ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ಆಚರಿಸಲಾಗುತ್ತದೆ. ಬಾನೆತ್ತರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ. 80 ನೇ ಸ್ವಾತಂತ್ರ್ಯೋತ್ಸವದ ಈ ಶುಭ ಸಂದರ್ಭದಲ್ಲಿ ನೀವು ನಿಮ್ಮ ಕುಟುಂಬಸ್ಥರು ಮತ್ತು…

Read More

ಸದಾಶಿವನಗರ ನಿವಾಸದಲ್ಲಿ ಸಿಎಂ ಡಿಕೆಶಿ ಧ್ವಜಾರೋಹಣ: ರಾಗ-ದ್ವೇಷವಿಲ್ಲದೆ ಜನರ ಸೇವೆಗೆ ಬದ್ಧ ಎಂದು ಮುಖ್ಯಮಂತ್ರಿ – Kannada News | Karnataka CM DK Shivakumars 77th I Day Celebration: Tributes and Flag Hoisting

ಬೆಂಗಳೂರು, ಆ.15: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಮ್ಮ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅದ್ದೂರಿಯಾಗಿ ಮತ್ತು ಭಕ್ತಿಪೂರ್ವಕವಾಗಿ ಆಚರಿಸಿದರು. ದೇಶದೆಲ್ಲೆಡೆ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದ್ದ ಈ ದಿನದಂದು, ಡಿಸಿಎಂ ಅವರು ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಿದರು. ಈ ಮಹತ್ವದ ಸಂದರ್ಭದಲ್ಲಿ, ಅವರ ಪತ್ನಿ ಶ್ರೀಮತಿ ಉಷಾ ಶಿವಕುಮಾರ್ ಅವರು ಅವರ ಜೊತೆಯಲ್ಲಿದ್ದು, ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಈ ಸಮಾರಂಭದಲ್ಲಿ, ಸಿಎಂ…

Read More

CM DK Shivakumar Independence Day Speech Live: ಧ್ವಜಾರೋಹಣ ಮಾಡಿ ಸಿಎಂ ಡಿ.ಕೆ. ಶಿವಕುಮಾರ್ ಭಾಷಣ – Kannada News | Karnataka CM D.K. Shivakumar Greets Nation on 80th Independence Day; Honors Legends

ಬೆಂಗಳೂರು, ಆ.15: 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ ಹಾರ್ದಿಕ ಶುಭಾಶಯ ಕೋರಿದ್ದಾರೆ. ದೇಶದ ಐಕ್ಯತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಎಲ್ಲಾ ಮಹನೀಯರಿಗೆ ಗೌರವ ನಮನ ಸಲ್ಲಿಸಿದರು. ಇದೀಗ ಸಿಎಂ ಡಿಕೆ ಶಿವಕುಮಾರ್​​ ಅವರು ಭಾಷಣ ಮಾಡುತ್ತಿದ್ದಾರೆ, ಇಲ್ಲಿದೆ ನೋಡಿ ಲೈವ್ ವಿಡಿಯೋ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

‘ರಾವಣನ ಪಾತ್ರವನ್ನು ನನಗಿಂತ ಉತ್ತಮವಾಗಿ ಯಾರೂ ಅಭಿನಯಿಸಲು ಸಾಧ್ಯವಿಲ್ಲ’; ಯಶ್ – Kannada News | Yash Becomes First Kannada Actor on Aap Ki Adalat; Reveals Why He Plays Ravana in Ramayana

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಇನ್ನು, ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ರಿಲೀಸ್ ಆಗುತ್ತಿದೆ. ಈ ವೇಳೆ ಅವರು ದೇಶದ ಅತ್ಯಂತ ಜನಪ್ರಿಯ ಟಿವಿ ಶೋ ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ಮೂಲಕ ಶೋಗೆ ಬಂದ ಮೊದಲ ಕನ್ನಡದ ನಟ ಎಂಬ ಹೆಗ್ಗಳಿಕೆಗೆ ಯಶ್ ಪಾತ್ರರಾಗಿದ್ದಾರೆ. ಈ ಶೋನಲ್ಲಿ ಹಿರಿಯ ಪತ್ರಕರ್ತ ರಜತ್ ಶರ್ಮಾ ಅವರ…

Read More

ಪರಮಾಣು ಶಕ್ತಿಯಲ್ಲೂ ಭಾರತ ಸ್ವಾವಲಂಬಿಯಾಗಲಿದೆ; ಪ್ರಧಾನಿ ಮೋದಿ ಭರವಸೆ – Kannada News | Noted India moving towards greater self reliance in nuclear power PM Modi says in Independence Day Speech

ನವದೆಹಲಿ, ಆಗಸ್ಟ್ 15: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi Independence Day Speech) ತಮ್ಮ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಹಲವು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು. ಹೆಚ್ಚಿನ ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ಅಣುಶಕ್ತಿ, ಕಡಲಾಚೆಯ ತೈಲ ಅನ್ವೇಷಣೆ, ಪರ್ಯಾಯ ಇಂಧನಗಳು ಮತ್ತು ನಿರ್ಣಾಯಕ ಖನಿಜಗಳನ್ನು ಪ್ರಮುಖ ಸ್ತಂಭಗಳನ್ನಾಗಿ ಹೊಂದಿರುವ ವಿಸ್ತೃತ ಮಾರ್ಗಸೂಚಿಯನ್ನು ಅವರು ಅನಾವರಣಗೊಳಿಸಿದರು. ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಅಗತ್ಯವನ್ನು ಎತ್ತಿಹಿಡಿದ ಪ್ರಧಾನಿಯವರು, ಭಾರತವು ಅಣುಶಕ್ತಿಯಲ್ಲಿ ಹೆಚ್ಚಿನ ಸ್ವಾವಲಂಬನೆಯತ್ತ ಸಾಗುತ್ತಿದೆ ಮತ್ತು…

Read More